ಕನ್ನಡ ಸಾಹಿತ್ಯ ಲೋಕದ ದಿಗ್ಗಜರು,ಸಾಹಿತ್ಯಾಸಕ್ತರು,ಕನ್ನಡ ಅಭಿಮಾನಿಗಳು ಬೃಹತ್ ಸಂಖ್ಯೆಯಲ್ಲಿ ಒಂದೆಡೆ ಸೇರಿ,ಪ್ರಚಲಿತ ಸಾಹಿತ್ಯದ ಸ್ಥಿತಿಗತಿಗಳನ್ನು ಚರ್ಚಿಸುವಂತಹ ಬಹುದೊಡ್ಡ ವೇದಿಕೆ-ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ.ಪ್ರತಿ ವರ್ಷ ನಾಡಿನ ಬೇರೆ ಬೇರೆ ಸ್ಥಳಗಳಲ್ಲಿ ೩ ಅಥವಾ ೪ ದಿನಗಳ ಕಾಲ ಏರ್ಪಾಡಾಗುವ ಸಾಹಿತ್ಯ ಸಮ್ಮೇಳನದಲ್ಲಿ ವಿಚಾರ ಗೋಷ್ಟಿಗಳು,ಕವಿ ಗೋಷ್ಠಿಗಳು,ಸಂವಾದಗಳು,ಸಾಂಸ್ಕೃತಿಕ ಕಾರ್ಯಕ್ರಮಗಳು ಉನ್ನತ ಮಟ್ಟದಲ್ಲಿ ನಡೆಯುತ್ತವೆ.ಇವು ಕನ್ನಡಿಗರಿಗೆ ಹೆಚ್ಚು ಪ್ರಯೋಜನಕಾರಿಯಾಗಿವೆ.ಕನ್ನಡದ ಪುಸ್ತಕಗಳು ಅತಿಹೆಚ್ಚಿನ ಸಂಖ್ಯೆಯಲ್ಲಿ ಮಾರಾಟವಾಗುವ ಏಕೈಕ ಸ್ಥಳ ಕನ್ನಡ ಸಾಹಿತ್ಯ ಸಮ್ಮೇಳನಗಳು.ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ನಾಡಿನ ಹಿರಿಯ ಸಾಹಿತಿಗಳಿಗೆ ದೊರೆಯುವ ಅತ್ಯುನ್ನತ ಗೌರವ.ಇದೇ ಮಾದರಿಯಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಗಳು,ತಾಲ್ಲೂಕು ಹಾಗೂ ಹೋಬಳಿ ಸಾಹಿತ್ಯ ಸಮ್ಮೇಳನಗಳು ಜರುಗುತ್ತಿವೆ.ಕರ್ನಾಟಕದ ೫ ಗಡಿ ರಾಜ್ಯಗಳಲ್ಲಿ ಗಡಿನಾಡ ಸಾಹಿತ್ಯ ಸಮ್ಮೇಳನಗಳು ನಡೆಯುತ್ತಿರುವುದು ವಿಶೇಷ ಅಂಶವಾಗಿದೆ.ಇದಲ್ಲದೆ ಮಕ್ಕಳ ಸಾಹಿತ್ಯ ಸಮಾವೇಶ,ಜಾನಪದ ಸಮಾವೇಶ,ಹಾಗೂ ದಲಿತ ಮತ್ತು ಬಂಡಾಯ ಸಮಾವೇಶಗಳು ಇನ್ನೂ ಮೊದಲಾದ ಸಾಹಿತ್ಯಕ ಸಮಾವೇಶಗಳನ್ನು ಕಮ್ಮಟಗಳನ್ನು ನಡೆಸಲಾಗುತ್ತಿದೆ.
ಹೆಚ್ಚಿನ ಮಾಹಿತಿಗೆ ಈ ಕೆಳಗಿನ ವೆಬ್ ಸೈಟ್ ನೋಡಿ
http://kasapa.in/sahithyasammelana_pre.htm
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ